Versions
KNV ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು.
ERVKN ಆರೋನನಿಗೆ ಇನ್ನೂ ಜೀವಂತವಾಗಿದ್ದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಇಬ್ಬರು ಪುತ್ರರು ಇದ್ದರು. ಮೋಶೆಯು ಆರೋನನಿಗೆ ಮತ್ತು ಅವನ ಇಬ್ಬರು ಗಂಡುಮಕ್ಕಳಿಗೆ, “ಯಜ್ಞವೇದಿಕೆಯ ಮೇಲೆ ಅರ್ಪಿಸಿದ ಯಜ್ಞಗಳಲ್ಲಿಯೂ ಧಾನ್ಯನೈವೇದ್ಯದಲ್ಲಿಯೂ ಉಳಿದ ಭಾಗವನ್ನು ತೆಗೆದುಕೊಂಡು ನೀವು ತಿನ್ನಬೇಕು. ಆದರೆ ನೀವು ಅದಕ್ಕೆ ಹುಳಿಯನ್ನು ಸೇರಿಸದೆ ಯಜ್ಞವೇದಿಕೆಯ ಸಮೀಪದಲ್ಲಿಯೇ ತಿನ್ನಬೇಕು. ಯಾಕೆಂದರೆ ಆ ಸಮರ್ಪಣೆಯು ಬಹಳ ಪವಿತ್ರವಾಗಿದೆ.