Versions
KNV ಒಂದು ವರುಷ ಕಳೆದ ತರುವಾಯ ಅರಸುಗಳು ಯುದ್ಧಕ್ಕೆ ಹೊರಡುವಾಗ ದಾವೀದನು ಯೋವಾಬನನ್ನೂ ಅವನ ಸಂಗಡವಿದ್ದ ಅವನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಕಳುಹಿಸಿದನು; ಅವರು ಅಮ್ಮೋನನ ಮಕ್ಕಳನ್ನು ಸಂಹ ರಿಸಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಇನ್ನೂ ಯೆರೂಸಲೇಮಿನಲ್ಲೇ ಕಾದಿದ್ದನು.
ERVKN ವಸಂತಕಾಲದಲ್ಲಿ, ಎಲ್ಲಾ ರಾಜರೂ ಯುದ್ಧಕ್ಕೆ ಹೊರಡುವ ಸಮಯ ಬಂದಾಗ, ದಾವೀದನು ಯೋವಾಬನನ್ನೂ ಅವನ ಸೇವಕರನ್ನೂ ಮತ್ತು ಇಸ್ರೇಲರೆಲ್ಲರನ್ನೂ ಅಮ್ಮೋನಿಯರೊಂದಿಗೆ ಯುದ್ಧಮಾಡಲು ಕಳುಹಿಸಿದನು. ಯೋವಾಬನ ಸೈನ್ಯವು ರಬ್ಬಕ್ಕೆ ಮುತ್ತಿಗೆ ಹಾಕಿತು. ಆದರೆ ದಾವೀದನು ಜೆರುಸಲೇಮಿನಲ್ಲಿಯೇ ಉಳಿದುಕೊಂಡನು.
IRVKN {ದಾವೀದನ ನೀಚಕೃತ್ಯಗಳು} PS ರಾಜರೆಲ್ಲರು ಸಾಮಾನ್ಯವಾಗಿ ವಸಂತಕಾಲದ ಪ್ರಾರಂಭದಲ್ಲಿ ಯುದ್ಧಕ್ಕೆ ಹೊರಡುವ ಸಮಯವನ್ನು ಗೊತ್ತುಮಾಡುತ್ತಿದ್ದರು. ದಾವೀದನು ಯೋವಾಬನನ್ನೂ, ತನ್ನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ನಾಶ ಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. PEPS