Versions
KNV ಆದದರಿಂದ ಬಾಳನ ಎಲ್ಲಾ ಪ್ರವಾದಿಗಳನ್ನೂ ಸೇವಕರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆಯಿರಿ; ಒಬ್ಬನೂ ಬಾರದೆ ಇರಕೂಡದು. ನಾನು ಬಾಳನಿಗೆ ಮಹಾಬಲಿ ಕೊಡಬೇಕಾಗಿದೆ. ಯಾವನಾದರೂ ಬಾರದೆ ಹೋದರೆ ಅವನು ಬದುಕನು ಅಂದನು. ಯಾಕಂದರೆ ಯೇಹುವು ಬಾಳನನ್ನು ಆರಾಧಿಸುವ ವರನ್ನು ನಾಶಮಾಡುವ ಹಾಗೆ ಇದನ್ನು ತಂತ್ರದಿಂದ ಮಾಡಿದನು.
ERVKN ಬಾಳನ ಎಲ್ಲಾ ಯಾಜಕರನ್ನೂ ಪ್ರವಾದಿಗಳನ್ನೂ ಕರೆಯಿರಿ. ಬಾಳನನ್ನು ಆರಾಧಿಸುವ ಜನರೆಲ್ಲರನ್ನೂ ಒಟ್ಟಾಗಿ ಕರೆಯಿರಿ. ಯಾರೂ ಈ ಸಭೆಯಿಂದ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ. ನಾನು ಬಾಳನಿಗೆ ಮಹಾಯಜ್ಞವನ್ನು ಅರ್ಪಿಸಬೇಕೆಂದಿದ್ದೇನೆ. ಈ ಸಭೆಗೆ ಯಾರಾದರೂ ಬಾರದೆ ಇದ್ದರೆ ಅವರನ್ನು ನಾನು ಕೊಂದುಹಾಕುತ್ತೇನೆ!” ಎಂದು ಹೇಳಿದನು. ಆದರೆ ಅದು ಯೇಹುವಿನ ತಂತ್ರವಾಗಿತ್ತು. ಬಾಳನ ಭಕ್ತರನ್ನು ನಾಶಪಡಿಸಬೇಕೆಂಬುದೇ ಅವನ ಅಪೇಕ್ಷೆಯಾಗಿತ್ತು.
IRVKN ಆದುದರಿಂದ, ನೀವು ಬಾಳ್ ದೇವತೆಯ ಆರಾಧಕರಾದ ಎಲ್ಲಾ ಪ್ರವಾದಿಗಳನ್ನೂ, ಭಕ್ತರನ್ನೂ, ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನೂ ಬಾಳ್ ದೇವತೆಗೋಸ್ಕರ ಸರ್ವಾಂಗಯಜ್ಞವನ್ನು ಸಮರ್ಪಿಸಬೇಕೆಂದಿದ್ದೇನೆ, ಆದುದರಿಂದ ಅವರಲ್ಲಿ ಒಬ್ಬನೂ ಈ ಕಾರ್ಯಕ್ಕೆ ಬಾರದಿರಕೂಡದು, ಬಾರದವನು ಸಾಯಬೇಕು” ಎಂದು ಹೇಳಿದನು. ಯೇಹುವು ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.