Versions
KNV ಆಗ ಅರಸನು ರಾಣಿಯಾದ ಎಸ್ತೇರಳಿಗೆ--ಯೆಹೂ ದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿ ಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಕೊಂದು ನಾಶಮಾಡಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತ್ಯ ಗಳಲ್ಲಿ ಮಾಡಿದ್ದೇನು? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲ್ಪಡುವದು. ಇನ್ನೂ ನಿನ್ನ ಬೇಡುವಿಕೆ ಏನು? ಅದು ಮಾಡಲ್ಪಡುವದು ಎಂದು ಹೇಳಿದನು.
ERVKN ಮತ್ತು ರಾಣಿಯಾದ ಎಸ್ತೇರಳಿಗೆ, “ಶೂಷನ್ನಲ್ಲಿ ಯೆಹೂದ್ಯರು ಹಾಮಾನನ ಹತ್ತು ಗಂಡುಮಕ್ಕಳೂ ಸೇರಿಸಿ ಐನೂರು ಮಂದಿಯನ್ನು ಕೊಂದಿದ್ದಾರೆ. ಇನ್ನು ಬೇರೆ ಸಂಸ್ಥಾನಗಳಲ್ಲಿ ನಿನಗೇನಾಗಬೇಕು? ನನಗೆ ಹೇಳು. ನಾನು ಹಾಗೆಯೇ ಮಾಡಿಸುತ್ತೇನೆ” ಎಂದು ಹೇಳಿದನು.
IRVKN ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನ್ ಕೋಟೆಯಲ್ಲೇ ಐನೂರು ಜನರನ್ನೂ, ಹಾಮಾನನ ಹತ್ತು ಮಂದಿ ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ; ಉಳಿದ ರಾಜಸಂಸ್ಥಾನಗಳಲ್ಲಿ ಎಷ್ಟೋ ಜನರು ಹತರಾಗಿರಬಹುದು. ನಿನ್ನ ವಿಜ್ಞಾಪನೆ ಇನ್ನು ಯಾವುದಿದ್ದರೂ ನೆರವೇರುವುದು, ನೀನು ಏನು ಕೇಳಿಕೊಂಡರೂ ಕೊಡುವೆನು” ಎಂದು ಹೇಳಿದನು.