Versions
KNV ಕಂಚುಕಿಯ ಯಜಮಾ ನನು ಹೇಳಿದ್ದೇನಂದರೆ--ನಿಮ್ಮ ಅನ್ನಪಾನಾದಿಗಳನ್ನು ನೇಮಿಸಿದ ನನ್ನ ಒಡೆಯನಾದ ಅರಸನಿಗೆ ನಾನು ಭಯಪಡುತ್ತೇನೆ; ಅವನು ಯಾಕೆ ನಿಮ್ಮ ಮುಖಗಳನ್ನು ನಿಮ್ಮ ಸ್ಥಿತಿಯಲ್ಲಿಯೇ ಇರುವ ಯೌವನಸ್ಥರಿಗಿಂತ ಕಳೆಗುಂದಿದವುಗಳನ್ನಾಗಿ ನೋಡಬೇಕು? ಈ ಪ್ರಕಾರ ನೀವು ಅರಸನ ಹತ್ತಿರ ನನ್ನ ತಲೆಗೆ ಅಪಾಯವನ್ನು ಬರಮಾಡುತ್ತೀರಿ ಅಂದನು.
ERVKN ಆದರೆ ಅಶ್ಪೆನಜನು ದಾನಿಯೇಲನಿಗೆ, “ನಾನು ನನ್ನ ಒಡೆಯನಾದ ಅರಸನಿಗೆ ಹೆದರುತ್ತೇನೆ. ಈ ಆಹಾರ ಮತ್ತು ಪಾನೀಯಗಳನ್ನು ನಿನಗೆ ಕೊಡಬೇಕೆಂದು ಅರಸನು ಅಪ್ಪಣೆ ಮಾಡಿದ್ದಾನೆ. ನೀನು ಈ ಆಹಾರವನ್ನು ತೆಗೆದುಕೊಳ್ಳದಿದ್ದರೆ ಅಶಕ್ತನಾಗಿಯೂ ಅಸ್ವಸ್ಥನಾಗಿಯೂ ಕಾಣಿಸುವೆ. ನೀನು ನಿನ್ನ ವಯಸ್ಸಿನ ಬೇರೆ ತರುಣರಿಗಿಂತ ಸೊರಗಿದವನಾಗಿ ಕಾಣುವೆ. ಅರಸನು ಇದನ್ನು ಗಮನಿಸಿ ನನ್ನ ಮೇಲೆ ಕೋಪಗೊಂಡು ನನ್ನ ತಲೆಯನ್ನೇ ಕತ್ತರಿಸಬಹುದು. ಅದಕ್ಕೆ ನೀನೇ ಹೊಣೆಯಾಗುವೆ” ಎಂದನು.
IRVKN ಆ ವಿಜ್ಞಾಪನೆಯನ್ನು ಕೇಳಿ ಕಂಚುಕಿಯರ ಅಧ್ಯಕ್ಷನು ದಾನಿಯೇಲನಿಗೆ, “ನಿಮಗೆ ಆಹಾರ ಮತ್ತು ಪಾನಗಳನ್ನು ಏರ್ಪಡಿಸಿದ್ದ ನನ್ನ ಒಡೆಯನಾದ ರಾಜನು ನಿಮ್ಮಂತೆ ಆರಿಸಲ್ಪಟ್ಟ ಯುವಕರ ಮುಖಕ್ಕಿಂತ ನಿಮ್ಮ ಮುಖವು ಬಾಡಿರುವುದನ್ನು ನೋಡಿ, ರಾಜನು ನನ್ನ ತಲೆಯನ್ನು ನೀವು ತೆಗೆಯಿಸಲು ಕಾರಣರಾಗುವಿರಿ” ಎಂದು ಭಯ ವ್ಯಕ್ತಪಡಿಸಿದನು. PEPS