Versions
KNV ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು; ಯಾಕಂದರೆ ಪೂರ್ವದಲ್ಲಿ ಅವನನ್ನು ಹಗೆಮಾಡಲಿಲ್ಲ ಅರಿಯದೆ ತನ್ನ ನೆರೆಯವನನ್ನು ಹೊಡೆದನು.
ERVKN ಆದರೆ ಅವನನ್ನು ಬೆನ್ನಟ್ಟಿಕೊಂಡು ಬಂದವನು ಆಶ್ರಯನಗರಕ್ಕೆ ಬಂದರೆ, ಆ ನಗರದ ನಾಯಕರು ಕೊಂದವನನ್ನು ಬೆನ್ನಟ್ಟಿ ಬಂದವನ ಕೈಗೆ ಒಪ್ಪಿಸಬಾರದು. ಆಶ್ರಯಕೋರಿ ಅವರಲ್ಲಿಗೆ ಬಂದ ವ್ಯಕ್ತಿಯನ್ನು ಅವರು ರಕ್ಷಿಸಬೇಕು. ಯಾಕಂದರೆ ಆ ನರಹತ್ಯವು ಆಕಸ್ಮಿಕವಾದದ್ದೇ ಹೊರತು ದ್ವೇಷದಿಂದ ಮಾಡಿದ್ದಲ್ಲ.
IRVKN ಹತವಾದವನ ಸಮೀಪ ಬಂಧುವು ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಏಕೆಂದರೆ ಅವನು ನೆರೆಯವನನ್ನು ಹಳೆಯ ದ್ವೇಷವೇನೂ ಇಲ್ಲದೆ ಆಕಸ್ಮಾತ್ತಾಗಿ ಕೊಂದನು.