Versions
KNV ತರುವಾಯ ಅವನು ಕಟ್ಟಿಗೆಗಳನ್ನು ಇಟ್ಟು ಹೋರಿ ಯನ್ನು ತುಂಡುತುಂಡಾಗಿ ಕಡಿದು ಕಟ್ಟಿಗೆಗಳ ಮೇಲೆ ಇಟ್ಟು--ನೀವು ನಾಲ್ಕು ಮಡಕೆ ನೀರನ್ನು ತುಂಬಿಕೊಂಡು ದಹನಬಲಿಯ ಮೇಲೆಯೂ ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ ಅಂದನು.
ERVKN ನಂತರ ಎಲೀಯನು ಸೌದೆಯನ್ನು ಯಜ್ಞವೇದಿಕೆಯ ಮೇಲೆ ಇಟ್ಟನು. ಅವನು ಹೋರಿಯನ್ನು ತುಂಡುತುಂಡಾಗಿ ಕತ್ತರಿಸಿದನು. ಅವನು ಆ ತುಂಡುಗಳನ್ನು ಸೌದೆಯ ಮೇಲಿಟ್ಟನು.
IRVKN ಇದಲ್ಲದೆ ಕಟ್ಟಿಗೆಯನ್ನು ಯಜ್ಞವೇದಿಯ ಮೇಲೆ ಕ್ರಮಪಡಿಸಿ, ಹೋರಿಯನ್ನು ವಧಿಸಿ ತುಂಡು ಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಸುರಿಯಿರಿ” ಎಂದು ಆಜ್ಞಾಪಿಸಿದನು.