Versions
KNV ಅರಸನ ಆಜ್ಞೆಯು ತೀಕ್ಷ್ಣವಾಗಿಯೂ ಆವಿಗೆಯು ಧಗಧಗನೆ ಉರಿದದ್ದರಿಂದಲೂ ಬೆಂಕಿಯ ಜ್ವಾಲೆಯು ಶದ್ರಕ್ ಮೇಷಕ್ ಅಬೇದ್ನೆಗೋ ಎಂಬವರನ್ನು ಎತ್ತಿಹಾಕಿದ ಆ ಮನುಷ್ಯರನ್ನೇ ಸಂಹರಿಸಿತು.
ERVKN ಆಜ್ಞೆಯನ್ನು ಕೊಟ್ಟಾಗ ಅರಸನು ತುಂಬ ಕೋಪದಲ್ಲಿದ್ದನು. ಆದುದರಿಂದ ತಕ್ಷಣ ಕುಲುಮೆಯಲ್ಲಿ ಅತಿ ಹೆಚ್ಚು ಬೆಂಕಿಯನ್ನು ಉರಿಸಲಾಯಿತು. ಆ ಜ್ವಾಲೆ ಎಷ್ಟು ಭಯಂಕರವಾಗಿತ್ತೆಂದರೆ ಶದ್ರಕ್, ಮೇಶಕ್, ಅಬೇದ್ನೆಗೋ ಇವರುಗಳನ್ನು ಕುಲುಮೆಯಲ್ಲಿ ಎಸೆಯಲು ಹೋದ ಶಕ್ತಿಶಾಲಿಗಳಾದ ಸೈನಿಕರೇ ಅದರ ತಾಪಕ್ಕೆ ಸತ್ತುಹೋದರು.