Versions
KNV ನೆಮ್ಮದಿಯಿಂದ ಸಂಸ್ಥಾನದ ಫಲವತ್ತಾದ ಪ್ರದೇಶ ಗಳಲ್ಲಿ ನುಗ್ಗಿ ತಂದೆ ತಾತಂದಿರು ಮಾಡದ ಕಾರ್ಯ ಗಳನ್ನು ಮಾಡುವನು; ಸೂರೆ, ಸುಲಿಗೆ, ಕೊಳ್ಳೆಹೊಡೆ ದವುಗಳನ್ನು ಅವರಲ್ಲಿ ಚೆಲ್ಲಿಬಿಡುವನು. ಹೌದು, ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತ ಕಾಲದ ತನಕ ಕಲ್ಪಿಸುತ್ತಿರುವನು.
ERVKN “ಶ್ರೀಮಂತ ದೇಶಗಳು ನೆಮ್ಮದಿಯಿಂದಿರುವಾಗ ಈ ಕ್ರೂರಿಯು ಪೂರ್ವ ಸೂಚನೆಯಿಲ್ಲದೆ ಅವುಗಳ ಮೇಲೆ ದಾಳಿ ಮಾಡುವನು. ಅವನು ಸರಿಯಾದ ಸಮಯಕ್ಕೆ ದಾಳಿಮಾಡುವನು; ಅವನ ಪೂರ್ವಿಕರು ವಿಫಲರಾದ ದೇಶಗಳಲ್ಲಿ ಜಯ ಸಂಪಾದಿಸುವನು. ಅವನು ಸೋಲಿಸಿದ ದೇಶಗಳನ್ನು ಕೊಳ್ಳೆಹೊಡೆದು ದೊರೆತ ಸಂಪತ್ತನ್ನು ತನ್ನ ಅನುಯಾಯಿಗಳಲ್ಲಿ ಹಂಚುವನು. ಅವನು ಭದ್ರವಾದ ನಗರಗಳನ್ನು ಹಿಡಿದುಕೊಳ್ಳಲು ಮತ್ತು ನಾಶಮಾಡಲು ಯೋಜನೆಗಳನ್ನು ಮಾಡುವನು. ಅವನಿಗೆ ಜಯಸಿಕ್ಕಿದರೂ ಅದು ಸ್ವಲ್ಪ ಕಾಲದವರೆಗೆ ಮಾತ್ರ ಇರುತ್ತದೆ.