Versions
KNV ಕರಿಸಲ್ಪಡದೆ ಅರಸನ ಬಳಿಗೆ ಒಳಮನೆಯಲ್ಲಿ ಪ್ರವೇಶಿಸುವ ಯಾವನಾದರೂ ಗಂಡಸಾದರೂ ಸರಿ ಹೆಂಗಸಾದರೂ ಸರಿ ಬದುಕುವ ಹಾಗೆ ಅರಸನು ಬಂಗಾರದ ಮುದ್ರೆ ಕೋಲನ್ನು ಅವನ ಬಳಿಗೆ ಚಾಚಿ ದರೆ ಹೊರತು ಅವನನ್ನು ಕೊಲ್ಲಬೇಕೆಂಬ ಅವನ ಆಜ್ಞೆ ಒಂದೇ ಉಂಟೆಂದು ಅರಸನ ಸಮಸ್ತ ಸೇವ ಕರೂ ಅರಸನ ಪ್ರಾಂತ್ಯಗಳ ಜನರೂ ತಿಳಿದಿದ್ದಾರೆ. ಆದರೆ ನಾನು ಈ ಮೂವತ್ತು ದಿವಸಗಳಿಂದ ಅರಸನ ಬಳಿಗೆ ಕರೆಯಲ್ಪಡಲಿಲ್ಲ ಎಂದು ಅಂದಾಗ
ERVKN ಮೊರ್ದೆಕೈ, ಸಾಮ್ರಾಜ್ಯದಲ್ಲಿರುವ ಎಲ್ಲಾ ಅಧಿಕಾರಿಗಳಿಗೂ ಪ್ರಜೆಗಳಿಗೂ ತಿಳಿದಿರುವ ಒಂದು ವಿಷಯವೇನಂದರೆ, ರಾಜನು ಕರೆಯದೆ ಯಾರಾದರೂ ಆತನ ಬಳಿಗೆ ಹೋದರೆ ಅದಕ್ಕೆ ಮರಣದಂಡನೆಯೇ ಶಿಕ್ಷೆ ಎಂಬುದು. ರಾಜನು ತನ್ನ ಬಂಗಾರದ ದಂಡನ್ನು ಯಾರ ಮೇಲೆ ತೋರಿಸುವನೋ ಅವನು ಮರಣಶಿಕ್ಷೆಯಿಂದ ಪಾರಾಗುವನು. ಈಗ ರಾಜನು ನನ್ನನ್ನು ಕರೆದು ಮೂವತ್ತು ದಿವಸಗಳಾದವು.”
IRVKN “ಅರಸನು ತನ್ನ ಬಳಿಗೆ ಬರಲು ಹೇಳಿದ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀಪುರುಷರಿಗುಂಟು. ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು ಎಂಬುದು ಅರಸನ ಎಲ್ಲಾ ಸೇವಕರಿಗೂ ಮತ್ತು ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತು. ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವಾಗಲಿಲ್ಲ” ಎಂದು ಹೇಳಿಸಿದಳು.