Versions
KNV ಕರ್ತನು ಹೀಗೆ ಹೇಳುತ್ತಾನೆ--ಕುರುಬರು ಸಿಂಹದ ಬಾಯಲ್ಲಿರುವ ಎರಡು ಕಾಲನ್ನು ಅಥವಾ ಕಿವಿಯ ಒಂದು ತುಂಡನ್ನು ಹೊರ ತೆಗೆಯುವ ಹಾಗೆ ಸಮಾರ್ಯ ದಲ್ಲಿ ಹಾಸಿಗೆಯ ಮೂಲೆಯಲ್ಲಿಯೂ ದಮಸ್ಕದಲ್ಲಿ ಸುಪ್ಪತ್ತಿಗೆಯಲ್ಲಿಯೂ ಇರುವ ಇಸ್ರಾಯೇಲಿನ ಮಕ್ಕಳು ತಪ್ಪಿಸಲ್ಪಡುವರು.
ERVKN ಯೆಹೋವನು ಹೇಳುವುದೇನಂದರೆ, “ಒಂದುವೇಳೆ ಸಿಂಹವು ಒಂದು ಕುರಿಮರಿಯ ಮೇಲೆ ಎರಗಿದರೆ ಕುರುಬನು ಅದನ್ನು ರಕ್ಷಿಸಲು ಪ್ರಯತ್ನಿಸಾನು. ಆದರೆ ಕುರುಬನು ಆ ಕುರಿ ಮರಿಯ ಒಂದು ಭಾಗವನ್ನು ಮಾತ್ರ ಕಾಪಾಡಿಯಾನು. ಸಿಂಹದ ಬಾಯಿಂದ ಕುರಿಯ ಎರಡು ಕಾಲುಗಳನ್ನೊ ಕಿವಿಯ ಒಂದು ಭಾಗವನ್ನೋ ಎಳೆದು ರಕ್ಷಿಸಿಯಾನು. ಅದೇ ರೀತಿಯಲ್ಲಿ ಬಹುತೇಕ ಇಸ್ರೇಲರು ರಕ್ಷಿಸಲ್ಪಡುವದಿಲ್ಲ. ಸಮಾರ್ಯದಲ್ಲಿರುವ ಜನರು ತಮ್ಮ ಹಾಸಿಗೆಯ ಒಂದು ಮೂಲೆಯನ್ನಾಗಲಿ ಅಥವಾ ಮಂಚದ ಮೇಲಿನ ಬಟ್ಟೆಯ ಒಂದು ತುಂಡನ್ನಾಗಲಿ ಉಳಿಸಿಕೊಳ್ಳುವರು.”
IRVKN ಯೆಹೋವನು ಇಂತೆನ್ನುತ್ತಾನೆ:
“ * ಕಾಡುಮೃಗಗಳು ಪ್ರಾಣಿಗಳನ್ನು ಕೊಂದಾಗ ಅದು ಹೇಗೆ ಕೊಲ್ಲಲ್ಪಟ್ಟಿತ್ತು ಎಂದು ಮಾಲೀಕರಿಗೆ ತೋರಿಸುವುದಕ್ಕಾಗಿ ಪ್ರಾಣಿಗಳ ಕೆಲವು ಅವಶೇಷಗಳನ್ನು ತರುವುದು ಕುರುಬನ ಕರ್ತವ್ಯವಾಗಿತ್ತು. ಸಿಂಹದ ಬಾಯೊಳಗಿಂದ ಕುರುಬನು ತನ್ನ ಕುರಿಗಳ ಎರಡು ಕಾಲನ್ನೂ,
ಅಥವಾ ಕಿವಿಯ ಒಂದು ತುಂಡನ್ನೂ,
ಹೇಗೆ ರಕ್ಷಿಸುವನೋ, ಹಾಗೆಯೇ ಸಮಾರ್ಯದೊಳಗೆ ಹಾಸಿಗೆಯ ಮೂಲೆಯಲ್ಲಿಯೂ,
ಮಂಚದ ಪಟ್ಟೇದಿಂಬುಗಳಲ್ಲಿಯೂ,
ಒರಗಿಕೊಳ್ಳುವ ಇಸ್ರಾಯೇಲರ ಸ್ವಲ್ಪ ಭಾಗ ಮಾತ್ರ ರಕ್ಷಿಸಲ್ಪಡುವುದು.”