Versions
KNV ಇದಲ್ಲದೆ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ --ಉದಯದಲ್ಲಿ ದಹನಬಲಿಯನ್ನೂ ಸಾಯಂಕಾಲದ ಆಹಾರ ಸಮರ್ಪಣೆಯನ್ನೂ ಅರಸನ ದಹನಬಲಿ ಯನ್ನೂ ಆಹಾರ ಅರ್ಪಣೆಯನ್ನೂ ದೇಶದ ಜನರೆಲ್ಲರ ದಹನಬಲಿಯನ್ನೂ ಅವರ ಆಹಾರ ಸಮರ್ಪಣೆ ಯನ್ನೂ ಪಾನಗಳನ್ನೂ ದೊಡ್ಡ ಬಲಿಪೀಠದ ಮೇಲೆ ಸುಟ್ಟು ದಹನಬಲಿಯ ರಕ್ತವೆಲ್ಲವನ್ನೂ ಬಲಿಯ ರಕ್ತವೆಲ್ಲವನ್ನೂ ಚಿಮಿಕಿಸು; ಆದರೆ ಹಿತ್ತಾಳೆ ಬಲಿಪೀಠವು ನಾನು ವಿಚಾರಿಸುವ ನಿಮಿತ್ತವಾಗಿ ಇರಲಿ ಎಂದು ಆಜ್ಞಾಪಿಸಿದನು.
ERVKN ಅಹಾಜನು ಯಾಜಕನಾದ ಊರೀಯನಿಗೆ, “ಈ ದೇಶದ ಜನರೆಲ್ಲರೂ ಪ್ರಾತಃಕಾಲದಲ್ಲಿ ಸರ್ವಾಂಗಹೋಮವನ್ನೂ ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ ಮತ್ತು ಪಾನದ್ರವ್ಯಗಳನ್ನೂ ಸಮರ್ಪಿಸಲು ಮಹಾವೇದಿಕೆಯನ್ನು ಬಳಸಬೇಕು; ಸರ್ವಾಂಗಹೋಮಕ್ಕಾಗಿ ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸುವ ಪಶುಗಳ ರಕ್ತವನ್ನು ಈ ಮಹಾವೇದಿಕೆಯ ಮೇಲೆ ಚಿಮುಕಿಸಿ. ಆದರೆ ನಾನು ದೇವರಿಂದ ದೈವೋತ್ತರಗಳನ್ನು ಕೇಳಲು ತಾಮ್ರವೇದಿಕೆಯನ್ನು ಉಪಯೋಗಿಸುತ್ತೇನೆ” ಎಂದು ಹೇಳಿದನು.
IRVKN ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ, ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ ಇವುಗಳನ್ನೂ, ಜನರು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು” ಎಂದು ಹೇಳಿದನು. PEPS