Versions
KNV ಆದರೆ ಇಸ್ರಾಯೇಲ್ ಮಕ್ಕಳು--ಕರ್ತನ ಬಳಿಗೆ ಸಭೆಯೊಂದಿಗೆ ಇಸ್ರಾಯೇಲಿನ ಸಮಸ್ತ ಗೋತ್ರದಲ್ಲಿ ಬಾರದವರು ಯಾರು ಅಂದರು. ಯಾಕಂದರೆ ಕರ್ತನ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆಇಟ್ಟುಕೊಂಡಿದ್ದರು.
ERVKN ಆಮೇಲೆ ಇಸ್ರೇಲರು, “ಯೆಹೋವನ ಮುಂದೆ ಸಭೆ ಸೇರಿದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರೇಲರು ಯಾರಾದರೂ ಇದ್ದಾರೆಯೇ” ಎಂದು ವಿಚಾರಮಾಡಿದರು. ಮಿಚ್ಛೆ ನಗರದಲ್ಲಿ ಬೇರೆ ಕುಲಗಳ ಜೊತೆಗೆ ಯಾರು ಸೇರುವುದಿಲ್ಲವೋ ಅವರನ್ನು ಕೊಲೆ ಮಾಡುವುದಾಗಿ ಅವರು ಪ್ರತಿಜ್ಞೆ ಮಾಡಿದ್ದರು. ಅದಕ್ಕಾಗಿ ಅವರು ಅದರ ಬಗ್ಗೆ ವಿಚಾರಮಾಡಿದರು.
IRVKN ಮತ್ತು ಯೆಹೋವನ ಮುಂದೆ ಸಭೆ ಸೇರಿದಾಗ, ಬಾರದೆ ಇದ್ದಂಥ ಇಸ್ರಾಯೇಲರು ಯಾರಾರೆಂದು ವಿಚಾರಮಾಡಿದರು. ಯಾಕೆಂದರೆ ಮಿಚ್ಪೆಯಲ್ಲಿ, “ಯೆಹೋವನ ಸನ್ನಿಧಿಗೆ ಬಾರದವರನ್ನು ಕೊಂದು ಹಾಕುವೆವು” ಎಂದು ಆಣೆಯಿಟ್ಟು ಪ್ರಮಾಣಮಾಡಿದ್ದರು.