Versions
KNV ಆದರೆ ಸೌಲನು-- ದಾವೀದ ನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ--ನೀವು ದಾವೀದನಿಗೆ--ಅರಸನು ಯಾವ ತೆರವನ್ನೂ ಅಪೇಕ್ಷಿಸದೆ ತನ್ನ ಶತ್ರು ಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸು ತ್ತಾನೆಂದು ಹೇಳಿರಿ ಅಂದನು.
ERVKN ಸೌಲನು ಅವರಿಗೆ, “ನೀವು ದಾವೀದನ ಬಳಿಗೆ ಹೋಗಿ ಹೇಳಿ: ‘ನೀನು ರಾಜನ ಮಗಳಿಗಾಗಿ ಹಣ ಕೊಡಬೇಕಿಲ್ಲ. ಸೌಲನು ತನ್ನ ಶತ್ರುಗಳ ಮೇಲೆ ಸೇಡನ್ನು ತೀರಿಸಿಕೊಳ್ಳುತ್ತಾನೆ. ಆದುದರಿಂದ ಅವನ ಮಗಳನ್ನು ಮದುವೆಯಾಗಲು ಕೊಡಬೇಕಾದ ದಕ್ಷಿಣೆ ಏನಂದರೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲುಗಳು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು. ಸೌಲನ ರಹಸ್ಯವಾದ ಉಪಾಯ ಇದಾಗಿದ್ದಿತು. ಫಿಲಿಷ್ಟಿಯರು ದಾವೀದನನ್ನು ಕೊಂದು ಬಿಡಬಹುದೆಂದು ಸೌಲನು ಭಾವಿಸಿದ್ದನು.
IRVKN ಆಗ ಅವನು ಅವರಿಗೆ, “ನೀವು ಹೋಗಿ ದಾವೀದನಿಗೆ, ‘ಅರಸನು ತೆರವನ್ನು ಅಪೇಕ್ಷಿಸುವುದಿಲ್ಲ. ತನ್ನ ಶತ್ರುಗಳಾದ ಫಿಲಿಷ್ಟಿಯರಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರು ಮಂದಿಯ ಮುಂದೊಗಲನ್ನು ತಂದುಕೊಡಬೇಕು ಅನ್ನುತ್ತಾನೆ’ ಎಂದು ಹೇಳಿರಿ” ಎಂದು ಆಜ್ಞಾಪಿಸಿದನು. ದಾವೀದನನ್ನು ಫಿಲಿಷ್ಟಿಯರಿಂದ ಕೊಲ್ಲಿಸಬೇಕೆಂಬುದೇ ಅವನ ಉದ್ದೇಶವಾಗಿತ್ತು.