Versions
KNV ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು.
ERVKN ಅದೋರಾಮನೆಂಬ ಹೆಸರಿನ ಮನುಷ್ಯನು ಕೆಲಸಗಾರರ ಮೇಲ್ವಿಚಾರಕನಾಗಿದ್ದನು. ರಾಜನಾದ ರೆಹಬ್ಬಾಮನು ಜನರೊಂದಿಗೆ ಮಾತನಾಡಲು ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರೇಲಿನ ಜನರು ಅವನು ಸಾಯುವವರೆಗೆ ಅವನ ಕಡೆಗೆ ಕಲ್ಲುಗಳನ್ನು ಎಸೆದರು. ಆಗ ರೆಹಬ್ಬಾಮನು ತನ್ನ ರಥವನ್ನು ಹತ್ತಿ ತಪ್ಪಿಸಿಕೊಂಡು, ಜೆರುಸಲೇಮಿಗೆ ಓಡಿಹೋದನು.
IRVKN ರೆಹಬ್ಬಾಮನು ಬಿಟ್ಟೀ ಕೆಲಸದವರ ಮೇಲ್ವಿಚಾರಕನಾದ ಅದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಲು ಅವರು ಅವನನ್ನು ಕಲ್ಲೆಸೆದು ಕೊಂದರು. ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.