Versions
KNV ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.
ERVKN ಅವರು ಅರಸನ ಬಳಿಗೆ ಹೋಗಿ ತಮ್ಮ ಶಾಸನದ ಬಗ್ಗೆ ಅರಸನೊಂದಿಗೆ ಮಾತನಾಡಿದರು. ಅವರು, “ರಾಜನಾದ ದಾರ್ಯಾವೆಷನೇ. ಮುಂಬರುವ ಮೂವತ್ತು ದಿನಗಳಲ್ಲಿ ಯಾರಾದರೂ ನಿನ್ನ ಹೊರತು ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ಪ್ರಾರ್ಥನೆ ಸಲ್ಲಿಸಿದರೆ ಅವರನ್ನು ಸಿಂಹದ ಗುಹೆಯಲ್ಲಿ ಎಸೆಯಲಾಗುವುದೆಂಬ ಶಾಸನಕ್ಕೆ ನೀನು ರುಜು ಹಾಕಿರುವಿಯಲ್ಲವೆ?” ಎಂದು ಕೇಳಿದರು. ರಾಜನು, “ಹೌದು, ನಾನು ಆ ಶಾಸನಕ್ಕೆ ರುಜು ಹಾಕಿದ್ದೇನೆ. ಮೇದ್ಯಯರ ಮತ್ತು ಪಾರಸಿಯರ ಶಾಸನಗಳು ರದ್ದಾಗುವದಿಲ್ಲ ಮತ್ತು ಬದಲಾವಣೆ ಹೊಂದುವದಿಲ್ಲ” ಎಂದು ಉತ್ತರಕೊಟ್ಟನು.
IRVKN ಅವರು ರಾಜನ ಬಳಿಗೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, “ರಾಜನೇ, ಯಾರಾದರೂ ಮೂವತ್ತು ದಿನಗಳ ತನಕ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆವಿಜ್ಞಾಪನೆ ಮಾಡಿದರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ನಿಬಂಧನೆಗೆ ರುಜು ಹಾಕಿದ್ದೀಯಲ್ಲಾ” ಎಂದು ಕೇಳಲು, ರಾಜನು, “ಹೌದು, ಮೇದ್ಯರ ಮತ್ತು ಪಾರಸಿಯರ ರದ್ದಾಗದ ಧರ್ಮವಿಧಿಗಳಂತೆ ಇದು ಸ್ಥಿರವಾದ ನಿಬಂಧನೆ” ಎಂದು ಉತ್ತರಕೊಟ್ಟನು. PEPS