Versions
KNV ಯಾರೊಬ್ಬಾಮನು ಎಂಟನೇ ತಿಂಗಳ ಹದಿ ನೈದನೇ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ ಪೀಠದ ಮೇಲೆ ಬಲಿಗ ಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿ ನಲ್ಲಿ ಮಾಡಿ ಅವನು ಉಂಟುಮಾಡಿದ ಹೋರಿಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ಮಾಡಿದ ಉನ್ನತ ಸ್ಥಳಗಳ ಯಾಜಕರನ್ನೇ ನೇಮಿಸಿದನು.
ERVKN ರಾಜನಾದ ಯಾರೊಬ್ಬಾಮನು ಹೊಸಹಬ್ಬದ ದಿನವನ್ನು ಆರಂಭಿಸಿದನು. ಈ ಹಬ್ಬವು ಯೆಹೂದ್ಯರ ಪಸ್ಕಹಬ್ಬದಂತಿತ್ತು. ಆದರೆ ಈ ಹಬ್ಬವು ಎಂಟನೆಯ ತಿಂಗಳ ಹದಿನೈದನೆಯ ದಿವಸವಾಗಿತ್ತು. ಆ ಸಂದರ್ಭದಲ್ಲಿ ರಾಜನು ಬೇತೇಲ್ ನಗರದಲ್ಲಿ ಯಜ್ಞವೇದಿಕೆಯ ಮೇಲೆ ಯಜ್ಞಗಳನ್ನು ಅರ್ಪಿಸಿದನು. ಅವನು ತಾನೇ ನಿರ್ಮಿಸಿದ ಕರುಗಳಿಗೆ ಯಜ್ಞಗಳನ್ನು ಅರ್ಪಿಸಿದನು. ರಾಜನಾದ ಯಾರೊಬ್ಬಾಮನು ತಾನು ನಿರ್ಮಿಸಿದ ಎತ್ತರದ ಸ್ಥಳಗಳಲ್ಲಿ ಸೇವೆಮಾಡಲು ಯಾಜಕರನ್ನು ಬೇತೇಲ್ನಲ್ಲಿಯೇ ಆರಿಸಿಕೊಂಡನು.
IRVKN ಅವನು ಎಂಟನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ, “ಬೇತೇಲಿನಲ್ಲಿ ಯೆಹೂದ ದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕು” ಎಂದು ಅಪ್ಪಣೆ ಮಾಡಿ, ತಾನು ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ಯಜ್ಞವೇದಿಯ ಮೇಲೆ ಯಜ್ಞ ಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು. PS