Versions
KNV ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.
ERVKN ಯೆಹೋಷಾಫಾಟನು ಜನರ ಸಲಹೆಗಳನ್ನು ಕೇಳಿದನು; ಯೆಹೋವನನ್ನು ಸ್ತುತಿಸಲು ಗಾಯಕರನ್ನು ಆರಿಸಿದನು; ಯಾಕಂದರೆ ಆತನು ಪರಿಶುದ್ಧನು ಮತ್ತು ಅದ್ಭುತಸ್ವರೂಪನು. ಅವರು ಸೈನ್ಯದ ಮುಂದುಗಡೆಯಲ್ಲಿ ಹೋಗುತ್ತಾ ಆತನಿಗೆ ಸ್ತುತಿಗೀತೆಯನ್ನು ಹಾಡಿದರು. ಆ ಗಾಯಕರು, ‘ಯೆಹೋವನಿಗೆ ಸ್ತೋತ್ರಮಾಡಿರಿ. ಆತನ ಕರುಣೆಯು ನಿರಂತರವಾದದ್ದು” ಎಂದು ಹಾಡಿದರು.
IRVKN ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.