Versions
KNV ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.
ERVKN ಮಿಚ್ಪ ಜಿಲ್ಲಾಧಿಕಾರಿಯಾದ ಶಲ್ಲೂನನು ಬುಗ್ಗೆಬಾಗಿಲನ್ನು ರಿಪೇರಿ ಮಾಡಿದನು. ಶಲ್ಲೂನನು ಕೊಲ್ಹೋಜಿಯನ ಮಗ. ಬಾಗಿಲಿಗೆ ಕದ, ತಿರುಗಣಿ, ಅಗುಳಿಗಳನ್ನಿಟ್ಟು ಭದ್ರಪಡಿಸಿದನು. ನಂತರ ಗೋಡೆಯನ್ನು ರಾಜನ ತೋಟದ ಸಮೀಪದಲ್ಲಿದ್ದ ಸಿಲೋವಕೊಳದ ತನಕ ಮುಂದುವರಿಸಿ ದಾವೀದನಗರಕ್ಕೆ ಪ್ರವೇಶಿಸುವ ಮೆಟ್ಟಿಲುಗಳ ತನಕ ಗೋಡೆಯನ್ನು ಕಟ್ಟಿದನು.
IRVKN ಬುಗ್ಗೆ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ಒಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್. ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ದಾವೀದ ನಗರದಿಂದ ಇಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು.