Versions
KNV ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು.
ERVKN ಬೇತೇಲಿನ ಯಜ್ಞವೇದಿಕೆಯನ್ನು ಕುರಿತು ದೇವಮನುಷ್ಯನು ಹೇಳಿದ ಸಂದೇಶವು ರಾಜನಾದ ಯಾರೊಬ್ಬಾಮನಿಗೆ ಕೇಳಿಸಿತು. ಅವನು ತನ್ನ ಕೈಯನ್ನು ಯಜ್ಞವೇದಿಕೆಯಿಂದ ಥಟ್ಟನೆ ತೆಗೆದು, ಆ ಮನುಷ್ಯನ ಕಡೆಗೆ ಗುರಿಮಾಡಿ, “ಆ ಮನುಷ್ಯನನ್ನು ಹಿಡಿಯಿರಿ!” ಎಂದು ಹೇಳಿದನು. ಆದರೆ ರಾಜನು ಇದನ್ನು ಹೇಳಿದಾಗ, ಅವನ ಕೈಗೆ ಲಕ್ವ ಹೊಡೆಯಿತು. ಅವನು ಅದನ್ನು ಚಲಿಸಲಾಗಲಿಲ್ಲ,