Versions
KNV ಆಗ ಪಾಲಕನು ಮತ್ತು ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದು ಬಂದು--ಮರವನ್ನು ಕಡಿದು ನಾಶಮಾಡಿರಿ; ಆದರೆ ಅದರ ಬೇರಿನ ಮೋಟನ್ನು ಕಬ್ಬಿಣ ಮತ್ತು ಕಂಚುಗಳ ಕಟ್ಟುಳ್ಳದ್ದಾಗಿ ಭೂಮಿಯಲ್ಲಿಯೂ ಬಯಲಿನ ಎಳೇ ಹುಲ್ಲಿನಲ್ಲಿಯೂ ಬಿಡಿರಿ. ಅದು ಆಕಾಶದ ಮಂಜಿನಿಂದ ತೇವವಾಗಲಿ; ಏಳು ಕಾಲಗಳು ಕಳೆಯುವ ತನಕ ಅದರ ಪಾಲು ಕಾಡು ಮೃಗಗಳ ಸಹವಾಸದ ಗತಿಯಂತೆ ಬರಲಿ ಎಂದು ಸಾರುವದನ್ನು ಅರಸನಾದ ನೀನು ನೋಡಿದೆಯಲ್ಲಾ.
ERVKN “ಅರಸನೇ, ನೀನು ಆಕಾಶದಿಂದ ಇಳಿದುಬರುತ್ತಿದ್ದ ಒಬ್ಬ ಪರಿಶುದ್ಧ ದೇವದೂತನನ್ನು ಕಂಡೆ. ಅವನು, ‘ಮರವನ್ನು ಕಡಿದು ನಾಶಮಾಡಿರಿ. ಅದರ ಬುಡದ ಮೋಟಿನ ಸುತ್ತಲೂ ಕಬ್ಬಿಣದ ಮತ್ತು ಕಂಚಿನ ಒಂದು ಪಟ್ಟಿಯನ್ನು ಹಾಕಿರಿ. ಆ ಬುಡದ ಮೋಟನ್ನು ಮತ್ತು ಬೇರುಗಳನ್ನು ಭೂಮಿಯಲ್ಲಿ ಬಿಟ್ಟುಬಿಡಿ. ಅದರ ಸುತ್ತಲೂ ಕಾಡಿನ ಹುಲ್ಲು ಬೆಳೆಯಲಿ. ಅದು ಇಬ್ಬನಿಯಿಂದ ತೋಯ್ದು ಹೋಗಲಿ. ಅದು ಕಾಡುಪ್ರಾಣಿಯಂತೆ ಇರುವುದು. ಅದು ಏಳು ವರ್ಷ ಕಳೆಯುವವರೆಗೆ ಹಾಗೆಯೇ ಇರುವುದು’ ಎಂದು ಹೇಳಿದನು.