Versions
KNV ಆಗ ಯಾಜಕನಾದ ಯೆಹೋ ಯಾದನು ಸೈನ್ಯದ ಮೇಲೆ ಇರುವ ಶತಾಧಿಪತಿಗ ಳನ್ನು ಹೊರಗೆ ಕರತಂದು ಅವರಿಗೆ--ಅವಳನ್ನು ಸಾಲುಗಳ ಹೊರಗೆ ಹೊರಡಿಸಿರಿ, ಅವಳನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಂದುಹಾಕಿರಿ ಅಂದನು. ಯಾಕಂದರೆ ಕರ್ತನ ಆಲಯದಲ್ಲಿ ಅವ ಳನ್ನು ಕೊಲ್ಲಬೇಡಿರಿ ಎಂದು ಯಾಜಕನು ಹೇಳಿದನು.
ERVKN ಯಾಜಕನಾದ ಯೆಹೋಯಾದನು ಸೈನ್ಯಾಧಿಕಾರಿಗಳನ್ನು ಹೊರತಂದು, “ಅತಲ್ಯಳನ್ನು ಹೊರಗೆ ಎಳೆದುಕೊಂಡು ಹೋಗಿ, ಯಾರಾದರೂ ಆಕೆಯನ್ನು ಹಿಂಬಾಲಿಸಿದರೆ ಖಡ್ಗದಿಂದ ಅವರನ್ನು ಸಂಹರಿಸಿರಿ” ಎಂದು ಹೇಳಿದನು. ಆಗ ಯಾಜಕರು ಸಿಪಾಯಿಗಳಿಗೆ, “ಅತಲ್ಯಳನ್ನು ದೇವಾಲಯದೊಳಗೆ ಕೊಲ್ಲಬೇಡಿ” ಎಂದು ಎಚ್ಚರಿಸಿದರು.