Versions
KNV ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ ಏನಾಯಿತಂದರೆ, ಯೇಹುವು ಕಾವಲುಗಾರನಿಗೂ ಅಧಿಪತಿಗಳಿಗೂನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ ಅಂದನು.
ERVKN ಯೇಹುವು ಸರ್ವಾಂಗಹೋಮಗಳನ್ನು ಅರ್ಪಿಸಿದ ತಕ್ಷಣ, ಕಾವಲುಗಾರರಿಗೂ ಸೇನಾಧಿಪತಿಗಳಿಗೂ, “ಒಳಕೋಣೆಗೆ ಹೋಗಿ ಬಾಳನ ಆರಾಧಕರನ್ನೆಲ್ಲ ಕೊಂದುಹಾಕಿ! ಜೀವಸಹಿತ ಯಾರೂ ಆಲಯದಿಂದ ಹೊರಕ್ಕೆ ಬರಲು ಬಿಡಬೇಡಿ!” ಎಂದು ಹೇಳಿದನು. ಸೇನಾಧಿಪತಿಗಳು ಚೂಪಾದ ಖಡ್ಗದಿಂದ ಬಾಳನ ಭಕ್ತರನ್ನೆಲ್ಲ ಕೊಂದುಹಾಕಿದರು. ಬಾಳನ ಭಕ್ತರ ದೇಹಗಳನ್ನು ಕಾವಲುಗಾರರು ಮತ್ತು ಸೇನಾಧಿಪತಿಗಳು ಹೊರಕ್ಕೆ ಎಸೆದರು. ನಂತರ ಆ ಕಾವಲುಗಾರರು ಮತ್ತು ಸೇನಾಧಿಪತಿಗಳು ಬಾಳನ ಆಲಯದ ಒಳಕೋಣೆಯನ್ನು ಪ್ರವೇಶಿಸಿದರು.
IRVKN ಸರ್ವಾಂಗಹೋಮವನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ, ಸೇನಾಧಿಪತಿಗಳಿಗೂ, “ಒಳಗೆ ಹೋಗಿ ಅವರೆಲ್ಲರನ್ನೂ ಸಂಹರಿಸಿರಿ. ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿ ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಪಟ್ಟಣವನ್ನು ಪ್ರವೇಶಿಸಿದರು.