Versions
KNV ರಾಮೋತು ಗಿಲ್ಯಾದಿನಲ್ಲಿ ಗೇಬೆರ್ನ ಮಗನು, ಅವನಿಗೆ ಗಿಲ್ಯಾದಿನಲ್ಲಿರುವ ಮನಸ್ಸೆಯ ಮಗನಾದ ಯಾಯಾರನ ಊರುಗಳೂ ಬಾಷಾನಿ ನಲ್ಲಿರುವ ಅರ್ಗೋಬು ದೇಶವೂ ಇತ್ತು; ಅದರಲ್ಲಿ ಹಿತ್ತಾಳೆಯ ಅಗುಳಿಗಳೂ ಗೋಡೆಗಳೂ ಉಳ್ಳ ಅರುವತ್ತು ದೊಡ್ಡ ಪಟ್ಟಣಗಳಿದ್ದವು.
ERVKN ರಾಮೋತ್ ಗಿಲ್ಯಾದಿಗೆ ಬೆನ್ಗೆಬೆರನು ರಾಜ್ಯಪಾಲನಾಗಿದ್ದನು. ಗಿಲ್ಯಾದಿನ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಮತ್ತು ಪಟ್ಟಣಗಳೆಲ್ಲಕ್ಕೂ ಅವನು ರಾಜ್ಯಪಾಲನಾಗಿದ್ದನು. ಅವನು ಬಾಷಾನಿನ ಅರ್ಗೋಬ್ ಜಿಲ್ಲೆಗೂ ರಾಜ್ಯಪಾಲನಾಗಿದ್ದನು. ಈ ಪ್ರದೇಶದಲ್ಲಿ ಗೋಡೆಗಳಿಂದ ಸುತ್ತುವರಿದ ಅರವತ್ತು ನಗರಗಳಿದ್ದವು. ಈ ನಗರಗಳ ದ್ವಾರದಲ್ಲಿ ಹಿತ್ತಾಳೆಯ ಸಲಾಕೆಗಳುಳ್ಳ ಬಾಗಿಲುಗಳಿದ್ದವು.
IRVKN ರಾಮೋತ್ ಗಿಲ್ಯಾದಿನಲ್ಲಿದ್ದ ಗೆಬೇರನ ಮಗ, ಅವನು ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದನು.