Versions
KNV ಎರಡನೇ ದಿನ ದ್ರಾಕ್ಷಾರಸದ ಔತಣಕ್ಕೆ ಬಂದಾಗ ಅರಸನು ಮತ್ತೂ ಎಸ್ತೇರಳಿಗೆ--ರಾಣಿಯಾದ ಎಸ್ತೇರಳೇ, ನಿನ್ನ ಬೇಡುವಿಕೆ ಏನು? ಅದು ನಿನಗೆ ಕೊಡಲ್ಪಡುವದು; ನಿನ್ನ ವಿಜ್ಞಾಪನೆ ಏನು? ಅದು ನನ್ನ ರಾಜ್ಯದ ಅರ್ಧದ ವರೆಗೆ ಇದ್ದರೂ ಕೊಡಲ್ಪಡುವದು ಅಂದನು.
ERVKN ಈ ಔತಣ ಸಮಾರಂಭದ ಎರಡನೆಯ ದಿನದಂದು ಅವರಿಬ್ಬರೂ ದ್ರಾಕ್ಷಾರಸ ಸೇವನೆ ಮಾಡುತ್ತಿರುವಾಗ ತಿರಿಗಿ ರಾಜನು ತನ್ನ ರಾಣಿಯನ್ನು ಪ್ರಶ್ನಿಸಿದನು, “ಎಸ್ತೇರ್ ರಾಣಿಯೇ, ನಿನಗೆ ಬೇಕಾದದ್ದನ್ನು ಕೇಳಿಕೊ. ನಾನು ಕೊಡುವೆನು; ಅರ್ಧ ರಾಜ್ಯ ಬೇಕಾದರೂ ನಾನು ಕೊಡುತ್ತೇನೆ” ಎಂದನು.
IRVKN ಅವನು ಈ ಎರಡನೆಯ ದಿನದಲ್ಲಿಯೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಅರಸನು ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನೆರವೇರಿಸುವೆನು. ನೀನು ನನ್ನ ಅರ್ಧರಾಜ್ಯವನ್ನು ಕೇಳಿಕೊಂಡರೂ ಸರಿಯೇ, ಅದನ್ನು ನಿನಗೆ ಕೊಡುವೆನು” ಎಂದು ಹೇಳಿದನು.