Versions
KNV ಐಗುಪ್ತ ದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಹಣವು ಮುಗಿದಾಗ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು--ನಮಗೆ ರೊಟ್ಟಿಯನ್ನು ಕೊಡು, ನಾವು ನಿನ್ನ ಮುಂದೆ ಯಾಕೆ ಸಾಯಬೇಕು? ಯಾಕಂದರೆ ಹಣವೆಲ್ಲಾ ತೀರಿತು ಅಂದರು.
ERVKN ಸ್ವಲ್ಪ ಸಮಯದ ನಂತರ, ಈಜಿಪ್ಟ್ ಮತ್ತು ಕಾನಾನ್ ದೇಶಗಳಲ್ಲಿದ್ದ ಜನರಲ್ಲಿ ಹಣವು ಉಳಿದಿರಲಿಲ್ಲ. ಆದ್ದರಿಂದ ಈಜಿಪ್ಟಿನ ಜನರು ಯೋಸೇಫನ ಬಳಿಗೆ ಹೋಗಿ, “ದಯವಿಟ್ಟು ನಮಗೆ ಆಹಾರವನ್ನು ಕೊಡು. ನಮ್ಮ ಹಣವೆಲ್ಲ ಮುಗಿದುಹೋಗಿದೆ. ನಾವು ಊಟ ಮಾಡದಿದ್ದರೆ ನಿನ್ನೆದುರಿನಲ್ಲೇ ಸಾಯುತ್ತೇವೆ” ಎಂದು ಹೇಳಿದರು.
IRVKN ಐಗುಪ್ತ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು. PEPS